Saturday, 8 December 2018

ಮರದ ನೆರಳಲಿ ಮನೆಯ ಮಾಡಿ ಮನದ ಮರೆಯಲಿ ಕನಸ ಹೂಡಿ ದಣಿದುಂಡ್ ಮಲಗಿದವನ ಮನೆಯೇ ನಿಜ ಸುಖದ ಗುಡ.

ಏಕಾಂಗಿಯಾಗಿ ಹೊರಡು

ಏಕಾಂಗಿಯಾಗಿ ಹೊರಡು, ಯಾರಾದರು ಸಿಕ್ಕಾರು | ಏನನ್ನು ಬಯಸದೇ ಹೊರಡು, ಬೇಕಾದುದು ಸಿಕ್ಕೀತು |
ದಾರಿ ತೊರೆದು ನಡೆ, ಬಯಲು ದಕ್ಕೀತು |
ಗುರಿಯಿಲ್ಲದೆ ಹೊರಡು, ಅರಿವಿನ ಗುರುವು ಸಿಕ್ಕಾನು || ಪ ||

ನದಿಯ ಜಾಡು ಹಿಡಿ, ಕಡಲಾಗಬಹುದು |
ಧರ್ಮದ ನೆರಳ ತೊರೆ, ಮಹಾಮನೆ ಕಂಡೀತು |
ಸಾವನ್ನು ಹುಡುಕಿ ನಡೆ, ಬದುಕು ಸಿಕ್ಕೀತು |
ನಿನ್ನ ವಿರುದ್ಧ ನೀನು ಹೋರಾಡು, ಗೆದ್ದರೆ ಸಂತನಾಗುವೆ ನೀ || ೧ ||

ಸರಳ ರೇಖೆಯಾಗಿರು, ಬಾಳು ಹಗುರ ಆದೀತು | ಸತ್ಯವ ಹುಡುಕದಿರು, ಕಂಡದ್ದು ಸುಳ್ಳಾದೀತು | ಏಕತಾರಿಯ ಹಿಡಿ, ನಾದ ಲಯವೂ ಆದೀತು | ಚಲನೆಗೆ ಸಾಕ್ಷಿಯಾಗು, ಶೂನ್ಯ ತಬ್ಬಿಕೊಂಡೀತು || ೨ ||

ಎದೆಯ ದನಿಯ ನುಡಿ, ಹಾಡು ಬೆಡಗು ಆದೀತು | ಖಾಲಿಯಾಗಿ ಹೊರಡು, ಜೋಳಿಗೆ ತುಂಬೀತು | ತೆರೆದ ತೋಳಲ್ಲಿ ನಡೆ, ಬೊಗಸೆ ಪ್ರೀತಿ ದಕ್ಕೀತು | ಎಲ್ಲವನೂ ಕಳಚಿಟ್ಟು ಹೊರಡು, ಉಡಲು ಬೆಳಕೇ ಸಿಕ್ಕೀತು || ೩ ||

ಯಾರೂ ಒಂಟಿಯಲ್ಲ, ನೆರಳು ಹಿಂಬಾಲಿಸೆ || ನಡೆದಷ್ಟೂ ಹಾದಿ ಕಂಡಷ್ಟು ಬಯಲು  || ಹೊರಡು ಈಗಲೇ ಹೊರಡು || ಗುಂಡಾದ ಭೂಮಿಯಲ್ಲಿ ಎಂದಾದರು ಸಿಕ್ಕೇಸಿಗುತ್ತೇವೆ || ಮತ್ತೇ ಮತ್ತೇ ಸಿಕ್ಕೇ ಸಿಗುತ್ತೇವೆ || ೪ ||

- ಹಂದಲಗೆರೆ ಗಿರೀಶ್

No comments:

Post a Comment

ವೈಚಾರಿಕತೆ, ವೈಜ್ಞಾನಿಕತೆ, ಮಾನವತವಾದ.

ವೈಚಾರಿಕತೆ, ವೈಜ್ಞಾನಿಕತೆ, ಮಾನವತವಾದದ ಕುರಿತು ಪ್ರಶ್ನೆ/ ಪ್ರತಿರೋಧ/ ವಾಸ್ತವಿಕ ಕಟು ಸತ್ಯ ನುಡಿದು ಧರ್ಮ-ಪ್ರಭುತ್ವ-ಸಮಾಜದಿಂದ ಶೋಷಣೆಗಳಪಟ್ಟು ಸಮಾಜದಿಂದ ಬಹಿಷ್ಕಾರಕ್...